ವಿಕಲಚೇತನರ ಬಸ್ಪಾಸ್ ನವೀಕರಣ
ಉಡುಪಿ, ಜ.22: ಸರಕಾರದ ನಿರ್ದೇಶನದಂತೆ ರಾಜ್ಯ ರಸ್ತೆ ಸಾರಿಗೆ ನಿಗಮ ಗಳು ರಿಯಾಯಿತಿ ಬಸ್ಪಾಸ್ ಕೋರಿ ಅರ್ಜಿ ಸಲ್ಲಿಸುವ ವಿಕಲಚೇತನ ಫಲಾ ನುಭವಿಗಳಿಗೆ ರಿಯಾಯಿತಿ ಬಸ್ಪಾಸ್ಗಳನ್ನು ವಿತರಿಸುತ್ತಿದ್ದು, 2021ನೇ ಸಾಲಿನ ಬಸ್ಪಾಸ್ ಗಳನ್ನು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ, 2020ನೆ ಸಾಲಿನ ಬಸ್ಪಾಸ್ಗಳನ್ನು ಫೆ.28ರವರೆಗೆ ಮಾನ್ಯ ಮಾಡಲಾಗಿದೆ.
2021ನೆ ಸಾಲಿನಿಂದ ವಿಕಲಚೇತನರ ಬಸ್ಪಾಸ್ಗೆ ಸರಕಾರ ನಿಗದಿಪಡಿಸಿ ರುವ ಸೇವಾಸಿಂಧು ಪೋರ್ಟಲ್ನಲ್ಲಿ ತಮ್ಮ ವಿವರಗಳನ್ನು ಭರ್ತಿಗೊಳಿಸಿ ಅಗತ್ಯ ದಾಖಲೆಗಳನ್ನು ಜೆಪಿಜಿ ಅಥವಾ ಪಿಡಿಎಫ್ ನಮೂನೆಯಲ್ಲಿ ಆನ್ಲೈನ್ ನಲ್ಲಿ ಸಲ್ಲಿಸಬೇಕು. ಪಾಸುಗಳ ನವೀಕರಣ ಹಾಗೂ ನೂತನ ಪಾಸುಗಳಿಗೆ 660 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಬಸ್ಪಾಸ್ ನವೀಕರಿಸಿ ಕೊಳ್ಳುವವರು ಕರಾರಸಾ ನಿಗಮದ ಬಸ್ ನಿಲ್ದಾಣದ ಪಾಸ್ ಕೌಂಟರ್ಗಳಲ್ಲಿ ಹಾಗೂ ಹೊಸ ದಾಗಿ ಪಾಸು ಪಡೆಯುವವರು ವಿಭಾಗೀಯ ಕಚೇರಿಯಲ್ಲಿ ಹಣ ಪಾವತಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದೂರವಾಣಿ ಸಂಖ್ಯೆ: 0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿ ಸಂಪರ್ಕಿಸಬಹು ದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.