ಮರಣ ಪತ್ರ ಬರೆದು ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬ್ರಹ್ಮಾವರ, ಜ.22: ಮರಣ ಪತ್ರ ಬರೆದಿಟ್ಟು ಎಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ವೇಳೆ ಚಾಂತಾರು ಎಂಬಲ್ಲಿ ನಡೆದಿದೆ.
ಮೃತರನ್ನು ಚಾಂತಾರು ಗ್ರಾಮದ ಶ್ರೀಶ ಮಧ್ಯಸ್ಥ ಹಾಗೂ ತ್ರಿವೇಣಿ ದಂಪತಿ ಪುತ್ರಿ ಅನುಶ್ರೀ(16) ಎಂದು ಗುರುತಿಸಲಾಗಿದೆ. ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೆ ತರಗತಿ ಓದುತ್ತಿದ್ದ ಅನುಶ್ರೀ, ಮನೆಯಲ್ಲಿಯೇ ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುತ್ತಿದ್ದು, ಎರಡು ದಿನಕ್ಕೊಮ್ಮೆ ಶಾಲೆಗೆ ಹೋಗುತ್ತಿ ದ್ದಳು. ಇವರ ತಾಯಿ ಅದೇ ಶಾಲೆಯಲ್ಲಿ ಶಿಕ್ಷಕಿ ಯಾಗಿ ಕೆಲಸ ಮಾಡುತ್ತಿದ್ದರು.
ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮರಣ ಪತ್ರ ಬರೆದಿಟ್ಟ ಅನುಶ್ರೀ, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಲಾಕ್ ಮಾಡಿ, ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story