ಕಾಲ್ನಡಿಗೆ ಜಾಥಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ
ಉಡುಪಿ, ಜ.25: ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ರೈತ ವಿರೋಧಿ ಮಸೂದೆಗಳ ಕುರಿತಂತೆ ರೈತರು ನಡೆಸುತ್ತಿರುವ ಪ್ರತಿಭಟನಾ ಟ್ರಾಕ್ಟರ್ ಜಾಥವನ್ನು ಬೆಂಬಲಿಸಿ, ಉಡುಪಿ ಜಿಲ್ಲೆಯ ರೈತರ ಆಂದೋಲನ ಪರ ಸಂಘಟನೆಗಳ ಒಕ್ಕೂಟ ನಾಳೆ ಅಪರಾಹ್ನ 3 ಕ್ಕೆ ಹಮ್ಮಿಕೊಂಡ ಉಡುಪಿ ಬೋರ್ಡ್ ಹೈಸ್ಕೂಲ್ನಿಂದ ಅಜ್ಜರಕಾಡು ಹುತಾತ್ಮ ಸ್ಥಾರಕದವರೆಗಿನ ಕಾಲ್ನಡಿಗೆ ಜಾಥಾಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಪಕ್ಷದ ಕಾರ್ಯಕರ್ತರು ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Next Story