ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವ ಎಸ್. ಅಂಗಾರ ಭೇಟಿ
ಉಡುಪಿ : ರಾಜ್ಯದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಮಂಗಳವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಮಾಡಿದರು.
ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ ನಾಯಕ್, ಯಶಪಾಲ್ ಸುವರ್ಣ, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದ ರಾಜ್, ಕಡೆಕಾರ್ ಶ್ರೀಶ ಭಟ್, ಶ್ರೀಕೃಷ್ಣ ಸೇವಾ ಸಮಿತಿಯ ಪ್ರದೀಪ್ ರಾವ್ ಉಪಸ್ಥಿತರಿದ್ದರು.
Next Story