ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನಲ್ಲಿ ಗಣರಾಜ್ಯೋತ್ಸವ
ಮಂಗಳೂರು, ಜ.27: ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನಲ್ಲಿ 72ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ರಿಜಿಸ್ಟ್ರಾರ್ ಪ್ರೊ. ಡಾ. ಎ.ಎಂ. ಖಾನ್, ಬಿಐಟಿ ಮಂಗಳೂರಿನ ಪ್ರಾಂಶುಪಾಲರಾದ ಡಾ.ಎಸ್.ಐ. ಮಂಜುರ್ ಬಾಷಾ ಬೀಡ್ಸ್ನ ಪ್ರಾಂಶುಪಾಲರಾದ ಡಾ. ಅಶೋಕ್ ಮೆಂಡೊನ್ಸಾ ರಾಷ್ಟ್ರ ಧ್ವಜಾರೋಹಣಗೈದರು. ಬಳಿಕ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಮಾತನಾಡಿದರು.
ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಮತ್ತು ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.
ಡಾ. ಅಶೋಕ್ ಮೆಂಡೊನ್ಸಾ ವಂದಿಸಿದರು.