ಜ.31: ಉಪ ಮುಖ್ಯಮಂತ್ರಿ ಸವದಿ ಉಡುಪಿಗೆ
ಉಡುಪಿ, ಜ.28: ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂ. ಸವದಿ ಜ.31ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10 ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಸಚಿವರು 11ಕ್ಕೆ ಉಡುಪಿಯಲ್ಲಿ ಕ.ರಾ.ರ.ಸಾ.ನಿಗಮದ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ನಗರ ಸಾರಿಗೆ ಬಸ್ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಅಪರಾಹ್ನ 12 ರಿಂದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸವದಿ, 3 ಕ್ಕೆ ಉಡುಪಿ ಪರಿವೀಕ್ಷಣಾ ಮಂದಿರದಲ್ಲಿ ಮಂಗಳೂರು ಖಾಸಗಿ ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story