ವಿಷ ಜಂತು ಕಡಿತಕ್ಕೊಳಗಾಗಿ ಮೃತ್ಯು
ಗಂಗೊಳ್ಳಿ, ಫೆ.1: ವಿಷ ಜಂತು ಕಡಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಹಕ್ಲಾಡಿ ಗ್ರಾಮದ ಶಂಕರ ಶೆಟ್ಟಿ(56) ಎಂದು ಗುರುತಿಸಲಾಗಿದೆ. ಇವರು ಜ.16ರಂದು ರಾತ್ರಿ ವೇಳೆ ಹಕ್ಲಾಡಿ ಬಯಲಿನಲ್ಲಿ ನಡೆದು ಕೊಂಡು ಹೋಗುತ್ತಿರುವಾಗ ವಿಷ ಜಂತುವೊಂದು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಅಸ್ವಸ್ಥಗೊಂಡ ಇವರು, ಜ.31ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story