ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಾಲಕರ ಒಕ್ಕೂಟದಿಂದ ಧರಣಿ
ಬೆಂಗಳೂರು, ಫೆ.1: ಇಂಧನ ಬೆಲೆ ತಗ್ಗಿಸಿ, ಚಾಲಕರ ನಿಗಮ ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಚಾಲಕರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ಸೋಮವಾರ ನಗರದ ಫ್ರೀಂಡ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು, ಸಾರಥಿ ಸೂರು ಯೋಜನೆ ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಚಾಲಕರ ದಿನಾಚರಣೆಯನ್ನು ಸರಕಾರದ ವತಿಯಿಂದ ನಿಗದಿ ಮಾಡಬೇಕು. ವಾಣಿಜ್ಯ ವಾಹನಗಳಿಂದ ವಸೂಲು ಮಾಡುವ ತೆರಿಗೆಯಲ್ಲಿ ಶೇಖಡ 40ರಷ್ಟು ಕಡಿಮೆ ಮಾಡುವಂತೆ ಒತ್ತಾಯ ಮಾಡಲಾಯಿತು.
Next Story