ಮಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ಡಿವೈಎಫ್ಐನಿಂದ ಪ್ರತಿಭಟನೆ
ಮಂಗಳೂರು, ಫೆ.5: ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್ಐ ನೇತೃತ್ವದಲ್ಲಿ ಕೈಗಾಡಿ ಎಳೆದು ವಿನೂತನ ಮಾದರಿಯಲ್ಲಿ ನಗರದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಸಂಜೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಡಿವೈಎಫ್ಐ ದ.ಕ. ಜಿಲ್ಲಾದ್ಯಕ್ಷ ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜೆಎಂಎಸ್ ಜಿಲ್ಲಾ ಮುಖಂಡರಾದ ಜಯಂತಿ ಬಿ. ಶೆಟ್ಟಿ, ಭಾರತಿ ಬೋಳಾರ್, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಡಿವೈಎಫ್ಐ ನಗರ ಸಮಿತಿ ಮುಖಂಡರಾದ ಎ.ಬಿ. ನೌಶಾದ್, ರಫೀಕ್ ಪಿ.ಜಿ., ದೀಪಕ್ ಬಜಾಲ್, ಚರಣ್ ಶೆಟ್ಟಿ ಪಂಜಿಮೊಗರು, ಹನೀಫ್ ಮುಂತಾದವರು ಉಪಸ್ಥಿತರಿದ್ದರು.
ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷ ನವೀನ್ ಕೊಂಚಾಡಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿದರು.
Next Story