ನರಿಂಗಾನ : ಯುವಕ ಆತ್ಮಹತ್ಯೆ
ಕೊಣಾಜೆ : ಮಾನಸಿಕ ಖಿನ್ನತೆಯಿಂದ ಯುವಕನೊಬ್ಬಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ವಿದ್ಯಾನಗರದ ಕೆಮ್ಮಿಂಜೆಯಲ್ಲಿ ಗುರುವಾರ ಬೆಳಕಿಗೆ ಬಂದಿದೆ.
ವಿದ್ಯಾನಗರದ ಪ್ರವೀಣ್ (32) ಮೃತ ಯುವಕ ಎಂದು ಗುರುತಿಸಲಾಗಿದೆ.
ಅವಿವಾಹಿತನಾಗಿರುವ ಪ್ರವೀಣ್ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಆರೋಗ್ಯದ ಕುರಿತಾಗಿ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story