ಉಪ್ಪಿನಂಗಡಿ: ದಿಶಾ ರವಿ ಬಂಧನ ವಿರೋಧಿಸಿ ಎನ್.ಡಬ್ಲ್ಯು.ಎಫ್ ನಿಂದ ಪ್ರತಿಭಟನೆ
ಉಪ್ಪಿನಂಗಡಿ, ಫೆ.20: ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸ್ವಿಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಟೂಲ್ಕಿಟ್ ವಿಚಾರವಾಗಿ ಕರ್ನಾಟಕದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಉಪ್ಪಿನಂಗಡಿ ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾ (ಎನ್.ಡಬ್ಲ್ಯು.ಎಫ್) ವತಿಯಿಂದ ಶುಕ್ರವಾರ ಉಪ್ಪಿನಂಗಡಿ ನಾಡ ಕಚೇರಿ ಮುಂಭಾಗದಲ್ಲಿ ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಎನ್.ಡಬ್ಲ್ಯು.ಎಫ್. ಉಪ್ಪಿನಂಗಡಿ ವಲಯಾಧ್ಯಕ್ಷೆ ಮುಮ್ತಾಝ್, ದೇಶಾದ್ಯಂತ ನ್ಯಾಯಪರ ಹೋರಾಟಗಾರರು ಮತ್ತು ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದೆ., ರೈತ ವಿರೋಧಿ,, ಜನವಿರೋಧಿ ಕಾನೂನುಗಳನ್ನು ತಂದು ದೇಶವನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ಮೋದಿ ನೇತೃತ್ವದ ಕೇಂದ್ರ ಸರಕಾರ ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸುವ ರೈತರು ಮತ್ತು ಹೋರಾಟಗಾರರನ್ನು ಇಲ್ಲಸಲ್ಲದ ಆರೋಪಗಳನ್ನು ಹೊರಿಸುವ ಮೂಲಕ ಜೈಲಿಗಟ್ಟಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ.. ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಕೂಡಾ ಇದರ ಮುಂದುವರಿದ ಭಾಗವಾಗಿದೆ.. ಆದಷ್ಟು ಬೇಗ ದಿಶಾ ರವಿಯನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯ ಮಾಡಿದರು.
ಬಳಿಕ ಉಪ್ಪಿನಂಗಡಿ ಉಪ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ನ್ಯಾಷನಲ್ ವುಮೆನ್ಸ್ ಫ್ರಂಟ್ ನ ಕಾರ್ಯಕರ್ತೆಯರಾದ ಸೌದಾ,, ಝರೀನಾ,, ನಫೀಸಾ,, ಫೌಝಿಯಾ,, ನಸೀಮಾ,, ಸಫಿಯಾ,, ಶರೀಫಾ ಮೊದಲಾದವರು, ಭಾಗವಹಿಸಿದ್ದರು.