ಮಿಯ್ಯರು: ಚತುಃಪವಿತ್ರ ನಾಗಮಂಡಲೋತ್ಸವ
ಬ್ರಹ್ಮಾವರ, ಫೆ.22: ನಾಲ್ಕೂರು ಗ್ರಾಮದ ಮಿಯ್ಯಾರು ದೊಡ್ಮನೆ ಕುಟುಂಬಸ್ಥರ ಚತುಃಪವಿತ್ರ ನಾಗಮಂಡಲೋತ್ಸವವು ಚೇರ್ಕಾಡಿ ವೇದಮೂರ್ತಿ ಸುದರ್ಶನ ಸೂರ್ಯ ನಾಗಯಕ್ಷಿ ಪಾತ್ರೆಗಳ ನೇತೃತ್ವದಲ್ಲಿ ಹರಿಕೃಷ್ಣ ಉಡುಪರ ಮಾರ್ಗದರ್ಶನದಲ್ಲಿ ಸೋಮವಾರ ನೆರವೇರಿತು. ಮಧ್ಯಾಹ್ನ ಅನ್ನ ಸಂತರ್ಪಣೆ ಹಾಗೂ ಸಂಜೆ 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆದವು.
ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನಗೈದರು.
ಮುಖ್ಯ ಅತಿಥಿಗಳಾಗಿ ಸಂಸದ ಅನಂತ ಕುಮಾರ ಹೆಗಡೆ, ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಜಿಪಂ ಸದಸ್ಯ ಪ್ರತಾಪ್ ಹೆಗಡೆ ಮಾರಳಿ, ಎಂ.ಆರ್.ಜಿ. ಗ್ರೂಪ್ ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಶೆಟ್ಟಿ, ಸಮಾಜ ಸೇವಕ ರವಿಶಂಕರ್ ಶೆಟ್ಟಿ, ಪತ್ರಕರ್ತ ರಂಗನಾಥ್ ಭಾರಧ್ವಾಜ್, ಕಾಪು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಪ್ರವೀಣ್ ಕುಮಾರ್ ಶೆಟ್ಟಿ ಮಿಯ್ಯಾರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ರಾತ್ರಿ ನಾಗಮಂಡಲೋತ್ಸವ ನಡೆಯಿತು.
Next Story