ಕೋಡಿಯ ಬ್ಯಾರೀಸ್ ಕಾಲೇಜಿನಲ್ಲಿ ಐಟಿ ಕ್ಷೇತ್ರದಲ್ಲಿ ವೃತ್ತಿಯ ಆಯ್ಕೆ ಕುರಿತು ಕಾರ್ಯಕ್ರಮ
ಕುಂದಾಪುರ, ಫೆ.23: ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕ ವಿಭಾಗದ ಮಾಹಿತಿ ತಂತ್ರಜ್ಞಾನ ಘಟಕದ ವತಿಯಿಂದ ಶನಿವಾರ ಐಟಿ ಕ್ಷೇತ್ರದಲ್ಲಿ ವೃತ್ತಿ ಆಯ್ಕೆಯ ಕುರಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ, ಉಡುಪಿಯ ರೋಬೋಸಾಫ್ಟ್ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ಭಂಡಾರಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹ್ಮಾನ್, ಹಿರಿಯ ಉಪನ್ಯಾಸಕಿ ನೂತನ್ ಉಪಸ್ಥಿತರಿದ್ದರು.
ಘಟಕದ ಸಂಯೋಜಕಿಯಾದ ಉಪನ್ಯಾಸಕಿ ಹರ್ಷಿತಾ ಜಿ.ಪಿ. ಸ್ವಾಗತಿಸಿದರು. ವಿದ್ಯಾರ್ಥಿ ನವನೀತ್ ವಂದಿಸಿದರು. ಘಟಕದ ವಿದ್ಯಾರ್ಥಿ ಕಾರ್ಯದರ್ಶಿ ಅಲ್-ತಸ್ಮೀಯ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿ ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.
Next Story