ಭಟ್ಕಳ : ಅಪರಿಚಿತ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಭಟ್ಕಳ : ಅಪರಿಚಿತ ವಾಹನವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಕಾಮಾಕ್ಷಿ ಪೆಟ್ರೋಲ್ ಪಂಪ್ ಎದುರು ನಡೆದಿದೆ.
ಮೃತರನ್ನು ಜಾಲಿ ಪ.ಪಂಚಾಯತ್ ದೇವಿನಗರ ನಿವಾಸಿ ಸೈಯ್ಯದ್ ಆಸಿಫ್ ಮಿರಾಸಾಬ್ (65) ಎಂದು ಗುರುತಿಸಲಾಗಿದೆ.
ಇದೊಂದು ಹಿಟ್ ಆ್ಯಂಡ್ ರನ್ ಘಟನೆಯಾಗಿದ್ದು ಶಿರಾಲಿಯಿಂದ ಕುಂದಾಪುರ ಕಡೆಗೆ ಅತಿ ವೇಗದಿಂದ ಚಲಿಸುತ್ತಿದ್ದ ವಾಹನ ಶಮ್ಸುದ್ದೀನ್ ಸರ್ಕಲ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಸೈಯ್ಯದ್ ಆಸೀಫ್ ಎಂಬವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಚಾಲಕ ವಾಹನ ಸಹಿತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮುಹಮ್ಮದ್ ಶಫಿ ಎಂಬವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Next Story