ಹೆಲ್ತ್, ಟೆಂಪಲ್ ಟೂರಿಸಂ ಪೂರಕ ಯೋಜನೆ: ಸಚಿವ ಯೋಗೇಶ್ವರ್
ಮಂಗಳೂರು, ಫೆ. 26: ಕರಾವಳಿ ಯಲ್ಲಿ ಹೆಲ್ತ್ ಟೂರಿಸಂ, ಟೆಂಪಲ್ ಟೂರಿಸಂಗೆ ವಿಪುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಪಿಲಿಕುಳವನ್ನು ಒಳಗೊಂಡು ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಯೋಜನೆ ರೂಪಿಸಲು ಜಿಲ್ಲಾಧಿಕಾರಿ, ಸ್ಥಳೀಯ ಶಾಸಕರ ಜತೆ ಚರ್ಚಿಸಲಾಗುವುದು ಎಂದು ರಾಜ್ಯದ ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯ ಸಚಿಮ ಸಿ.ಪಿಯ ಯೋಗೇಶ್ವರ್ ತಿಳಿಸಿದ್ದಾರೆ.
ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿದ ಸಚಿವರು ಉದ್ಯಾನವನದ ಮೃಗಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಬಗ್ಗೀಸ್ ವಾಹನದಲ್ಲಿ ಕುಳಿತು ವೀಕ್ಷಣೆ ಮಾಡಿದರಲ್ಲದೆ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಧಿಕಾರಿ ಗಳಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಬಳಿ ಮಾತನಾಡಿದರು.
ವಿದೇಶ , ಹಾಗೂ ಹೊರ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ಇಲ್ಲಿ ತಂಗಲು ಅವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯ ಪ್ರಕಾಶ್ ಭಂಡಾರಿ, ಡಾ. ಕೆ.ವಿ.ರಾವ್, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.