ಶಿರಾಡಿ: ಕೆಎಸ್ಸಾರ್ಟಿಸಿ - ಪೊಲೀಸ್ ಬಸ್ ನಡುವೆ ಢಿಕ್ಕಿ
ನೆಲ್ಯಾಡಿ, ಫೆ.27. ಕೆಎಸ್ಸಾರ್ಟಿಸಿ ವೋಲ್ವೋ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಪೊಲೀಸ್ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ಶನಿವಾರ ಅಪರಾಹ್ನ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೋಲ್ವೋ ಬಸ್ ಕೆಂಪುಹೊಳೆ ಸಮೀಪದ ತಿರುವೊಂದರಲ್ಲಿ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಪೊಲೀಸ್ ಬಸ್ ಗೆ ಢಿಕ್ಕಿಯಾಗಿದೆ ಎಂದು ದೂರಲಾಗಿದೆ.
ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ.
Next Story