ಉರ್ವಸ್ಟೋರ್: ಡಿವೈಎಫ್ಐ ರಕ್ತದಾನ ಶಿಬಿರ
ಮಂಗಳೂರು, ಫೆ.28: ಡಿವೈಎಫ್ಐ ಉರ್ವಸ್ಟೋರ್ ಘಟಕ ಹಾಗೂ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಕದ್ರಿ ಹಿಲ್ಸ್ ಇವರ ಜಂಟಿ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಅಶೋಕನಗರ ಹಿಪ್ರಾ ಶಾಲೆಯಲ್ಲಿ ರಕ್ತದಾನ ಶಿಬಿರವು ರವಿವಾರ ನಡೆಯಿತು.
ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ನ ರತ್ನಾಕರ ಪಿ. ಹಾಗೂ ಜಗದೀಶ್ ಪೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಿವೈಎಫ್ಐ ಜಿಲ್ಲಾ ಮುಖಂಡ ದಯಾನಂದ ಶೆಟ್ಟಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಡಿವೈಎಫ್ಐ ಉರ್ವಸ್ಟೋರ್ ಘಟಕದ ಪ್ರಶಾಂತ್ ಎಂಬಿ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್ಐ ಮುಖಂಡರಾದ ರಾಜೇಶ್ ಕುಲಾಲ್, ಎಜೆ ಬ್ಲಡ್ ಬ್ಯಾಂಕ್ನ ಮ್ಯಾನೇಜರ್ ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಡಿವೈಎಫ್ಐ ಮುಖಂಡರಾದ ಪ್ರಚಾರ್ ಆಚಾರ್ ಸ್ವಾಗತಿಸಿ,ವಂದಿಸಿದರು.
Next Story