ಮೆಲ್ಕಾರ್ : ನಿವೃತ್ತಿ ಹೊಂದಿದ ಶಿರಸ್ತೇದಾರ ಶ್ರೀನಿವಾಸ್ ಗೆ ಬೀಳ್ಕೊಡಿಗೆ
ಮೆಲ್ಕಾರ್ : ಸತ್ಯನಿಷ್ಟೆ, ಪ್ರಾಮಾಣಿಕತೆಯ ಸೇವಾ ಮನೋಭಾವದ ಅಧಿಕಾರಿಗಳು ನಿವೃತ್ತಿ ಹೊಂದಿದಾಗ ಉಂಟಾಗುವ ಯಾತನೆ, ವೇದನೆಯು ತಡೆಯಲು ಅಸಾಧ್ಯ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಜೆ.ಡಿ.ರಮ್ಯಾ ಅಭಿಪ್ರಾಯ ಪಟ್ಟರು.
ಅವರು ಇಂದು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿ ಸಹಕಾರಿ ಹಾಗೂ ಖಾಸಗಿ ಪಡಿತರ ನ್ಯಾಯ ಬೆಲೆ ಅಂಗಡಿ ಒಕ್ಕೂಟ ಆಯೋಜಿಸಿದ ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀನಿವಾಸ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರ ಸನ್ಮಾನ ನೇರವೆರಿಸಿ ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ನ್ಯಾಯಬೆಲೆ ಅಂಗಡಿ ಒಕ್ಕೂಟದ ಅಧ್ಯಕ್ಷರಾದ ಮಹಮ್ಮದ್ ರಫೀಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ನ್ಯಾಯ ಬೆಲೆ ಅಂಗಡಿ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಧರ ಪೈ, ಪ್ರಧಾನ ಕಾರ್ಯದರ್ಶಿ ಜಗದೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷರಾದ ಜಗದೀಶ್ ಸ್ವಾಗತಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.