ಲಲಿತಕಲೆಗಳೊಂದಿಗೆ ಬದುಕನ್ನು ಸಂಭ್ರಮಿಸಿ: ಯು.ಎಸ್.ಶೆಣೈ
ಕುಂದಾಪುರ, ಮಾ.3: ಅಂಕ ಗಳಿಕೆಯೊಂದೇ ವಿದ್ಯಾರ್ಥಿಗಳ ಸಾಧನೆ ಯಾಗಿರದೆ ಲಲಿತಕಲೆಗಳೊಂದಿಗೆ ಬದುಕನ್ನು ಸಂಭ್ರಮಿಸಬೇಕು ಎಂದು ಕುಂದಪ್ರಭಾ ವಾರಪತ್ರಿಕೆ ಸಂಪಾದಕ ಯು.ಎಸ್.ಶೆಣೈ ಹೇಳಿದ್ದಾರೆ.ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಲಲಿತ ಕಲಾರಂಗ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ಮಾತನಾಡಿ, ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಭವಿಷ್ಯದ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ಹೇಳಿದರು.ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್ ಲಲಿತಕಲಾರಂಗದ ಸಂಘಟಕ ಡಾ.ಸಂದೀಪ್ ಕುಮಾರ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕಾರ್ತಿಕ್ ಸಂಪನ್ಮೂಲ್ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಕಾವ್ಯಾ ಸ್ವಾಗತಿಸಿ, ವಿದ್ಯಾರ್ಥಿನಿ ಸಾಯಿಮಾ ವಂದಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.
Next Story