ಕಾಸರಗೋಡು: ಸಮುದ್ರದಲ್ಲಿ ಮುಳುಗಿದ ಬೋಟ್
ಕಾಸರಗೋಡು : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ಮಗುಚಿ ಐವರು ಮೀನುಗಾರರು ಸಮುದ್ರದಲ್ಲಿ ಸಿಲುಕಿದ ಘಟನೆ ಬೇಕಲದಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಹಾಗೂ ಮೀನುಗಾರಿಕಾ ಇಲಾಖಾ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟ್ ನ ಒಂದು ಭಾಗದಲ್ಲಿ ಮೀನುಗಾರರು ಸಿಲುಕಿಕೊಂಡಿದ್ದರು.
ಈ ಬಗ್ಗೆ ಕರಾವಳಿ ರಕ್ಷಣಾ ಪಡೆಗೆ ಲಭಿಸಿದ ಮಾಹಿತಿಯಂತೆ ದೌಡಾಯಿಸಿದ ಸಿಬ್ಬಂದಿ ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ತೆರಳಿದ್ದ ಮರಿಯ ಎಂಬ ಈ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದು ಬಂದಿದೆ.
Next Story