ಪುತ್ತೂರು : ಭೂ ಕುಸಿತ; ಮಣ್ಣಿನಡಿಯಲ್ಲಿ ಸಿಲುಕಿದ ಇಬ್ಬರು ಕಾರ್ಮಿಕರು
ಪುತ್ತೂರು: ಪಾಣಾಜೆ ಗ್ರಾಮದ ಕೋಟೆ ರಸ್ತೆಯ ಕೆಮಾಜೆ ಎಂಬಲ್ಲಿ ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಭೂ ಕುಸಿತದಿಂದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.
ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಪಾಣಾಜೆ ಗ್ರಾಮದ ಪಾರ್ಪಳದವರು ಎಂದು ತಿಳಿದುಬಂದಿದೆ.
ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಇದರಿಂದ ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Next Story