ತಾಪಂ, ಜಿಪಂ ಚುನಾವಣೆಯಲ್ಲಿ ಕೆಆರ್ಎಸ್ ಪಕ್ಷ ಸ್ಪರ್ಧೆ: ರವಿಕೃಷ್ಣಾ ರೆಡ್ಡಿ
ಉಡುಪಿ, ಮಾ.6: ಮಸ್ಕಿ, ಬಸವಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಪರ್ಧಿಸುತ್ತಿದ್ದು, ಈಗಾಗಲೇ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆ ನಡೆಯುವ ತಾಪಂ, ಜಿಪಂ ಚುನಾವಣೆಯಲ್ಲೂ ಪಕ್ಷ ಸ್ಪರ್ಧಿಸಲಿದ್ದು, ಈ ಚುನಾವಣೆಗೆ ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಎಂಬುದಾಗಿ ಈಗಾಗಲೇ ಪ್ರತಿ ಜಿಲ್ಲೆಯವರಿಗೂ ಸೂಚನೆ ನೀಡಲಾಗಿದೆ ಎಂದರು.
ನಮ್ಮ ಪಕ್ಷವು ಹಣ ಹಂಚದ, ಹೆಂಡ ಕುಡಿಸದ, ಜಾತಿ ಮತ್ತು ಕೋಮು ರಾಜಕಾರಣ ಮಾಡದ ಪ್ರಾಮಾಣಿಕ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸು ತ್ತದೆ. ಯಾವುದೇ ಕಾರಣಕ್ಕೂ ಜಾಗ, ಆಸ್ತಿ ಮಾರಾಟ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಬೇಡಿ. ಇದು ವ್ಯವಹಾರ, ಉದ್ದಿಮೆ ಅಲ್ಲ. ಇದೊಂದು ಪವಿತ್ರವಾದ ಸೇವಾ ವಲು ಆಗಿದೆ ಎಂದು ಅವರು ಹೇಳಿದರು.
ಭ್ರಷ್ಟಾಚಾರದ ಫಲಾನುಭವಿಗಳೇ ಜನಪ್ರತಿನಿಧಿಗಳಾಗಿದ್ದಾರೆ. ಅವರನ್ನು ಬದಲಾಯಿಸದೆ ಈ ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ವಿಲ್ಲ. ಆದುದರಿಂದ ವಿದ್ಯಾವಂತರು, ಪ್ರಾಮಾಣಿಕರು ರಾಜಕಾರಣಕ್ಕೆ ಬಬೇಕು ಎಂದು ಅವರು ತಿಳಿಸಿದರು.