ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
ಕೋಟ: ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಾಸ್ಥಾನ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಆತ್ನಹತ್ಯೆ ಮಾಡಿಕೊಂಡ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂದು ಗುರುತಿಸಲಾಗಿದ್ದು, ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದರು. ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಅವರು ಇಲ್ಲಿನ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು.
ಚಂದ್ರ ಪೂಜಾರಿ ಇತ್ತೀಚಿನ ದಿನಗಳಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಚಂದ್ರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಇಂದು ಬೆಳಗ್ಗೆ ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನೆಡೆಸಿದ್ದಾರೆ.
Next Story