ಕಲಿಕೆಯಲ್ಲಿ ಹಿನ್ನಡೆ: ವಿದ್ಯಾರ್ಥಿನಿ ಆತ್ಮಹತ್ಯೆ
ಬೈಂದೂರು, ಮಾ.7: ಕಲಿಕೆಯಲ್ಲಿ ಹಿಂದಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.6ರಂದು ಸಂಜೆ ನಡೆದಿದೆ.
ಮೃತರನ್ನು ಶ್ವೇತಾ(17) ಎಂದು ಗುರುತಿಸಲಾಗಿದೆ. ಉಪ್ಪುಂದ ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಶ್ವೇತಾ, ಕಲಿಕೆಯಲ್ಲಿ ಹಿಂದುಳಿದಿದ್ದರು. ಕಾಲೇಜಿಗೆ ಹೋಗಿ ಮಧ್ಯಾಹ್ನ ವಾಪಸ್ಸು ಮನೆಗೆ ಬಂದಿದ್ದ ಆಕೆ, ತಾಯಿ ಹಾಲು ತರಲೆಂದು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story