ಹೊಳೆಗೆ ಬಿದ್ದು ಮೃತ್ಯು
ಗಂಗೊಳ್ಳಿ, ಮಾ.22: ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೊಬ್ಬರು ಗಂಗೊಳ್ಳಿ ಪಂಚ ಗಂಗಾವಳಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಮಾ.21ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಗಂಗೊಳ್ಳಿ ವಿನಾಯಕ ಸಾಮಿಲ್ ಹತ್ತಿರ ನಿವಾಸಿ ರಾಜು(65) ಎಂದು ಗುರುತಿಸಲಾಗಿದೆ. ಮೀನು ಹಿಡಿಯಲು ಹೋದ ಇವರು ಆಕಸ್ಮಿಕವಾಗಿ ಹೊಳೆಯಲ್ಲಿ ಬಿದ್ದು ಕೆಸರಿನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story