ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕರಾಗಿ ವಸಂತರಾಜ್
ವಸಂತರಾಜ್
ಉಡುಪಿ, ಎ.7: ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರಾಗಿ ಬಾರಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಕೆ.ವಸಂತರಾಜ ಶೆಟ್ಟಿ ಅವರನ್ನು ನೇಮಿಸಲಾಗಿದೆ.
ವಸಂತರಾಜ ಶೆಟ್ಟಿ ಇವರು ಪ್ರಾಂಶುಪಾಲರ ಪ್ರಭಾರವನ್ನು ಕಾಲೇಜಿನ ಸೇವಾ ಜೇಷ್ಠತೆಯಲ್ಲಿ ಹಿರಿಯ ಪ್ರಾಧ್ಯಾಪಕರಿಗೆ ವಹಿಸಿ ಪೂರ್ಣ ಕಾಲಿಕವಾಗಿ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.
Next Story