ಗಂಗೊಳ್ಳಿಯ 30 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕುಂದಾಪುರ, ಎ.8: ಗಂಗೊಳ್ಳಿ ಗ್ರಾಪಂ ವ್ಯಾಪ್ತಿಯ 30ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಗುರುವಾರ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಕಟ್ ಬೇಲ್ತೂರು ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾರ್ಯಕರ್ತರಿಗೆ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಬರಮಾಡಿ ಕೊಂಡ ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಮುಂದೆ ಬರುವ ಜಿಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ಪಕ್ಷ, ಸಂಘಟನೆ ಯನ್ನು ಗಂಗೊಳ್ಳಿಯಿಂದಲೇ ಆರಂಭಿಸಲಾಗುವುದು. ಇಂದು ಬೆಲೆ ಏರಿಕೆ ಯಿಂದಾಗಿ ಸಾಮಾನ್ಯ ಜನರು ಕಣ್ಣೀರು ಹಾಕುತ್ತಿದ್ದಾರೆ. ಕೇಂದ್ರ ಸರಕಾರದ ಬೆಲೆ ಏರಿಕೆ ಯನ್ನು ವಿರೋಧಿಸಿ ಜನರನ್ನು ಸಂಘಟಿಸಿ ಕೊಂಡು ತ್ರಾಸಿಯಿಂದ ಗಂಗೊಳ್ಳಿ ತನಕ ಪಾದಯಾತ್ರೆ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತ್ರಾಸಿ ಜಿಪಂ ಉಸ್ತುವಾರಿ ಶರತ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ದೇವಾಡಿಗ, ಗಂಗೊಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಖಾರ್ವಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಗಂಗೊಳ್ಳಿ, ಬ್ಲಾಕ್ ಉಪಾಧ್ಯಕ್ಷ ಝಾಹೀರ್ ಗಂಗೊಳ್ಳಿ, ವಂಡ್ಸೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕರ್ಕಿ ಉಪಸ್ಥಿತರಿದ್ದರು.