ಹಿರಿಯಡ್ಕ: ಟಿಪ್ಪರ್- ಬೈಕ್ ನಡುವೆ ಅಪಘಾತ; ಓರ್ವ ಮೃತ್ಯು
ಹಿರಿಯಡ್ಕ: ಟಿಪ್ಪರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಎಂಬಲ್ಲಿ ಇಂದು ಸಂಭವಿಸಿದೆ.
ಹಿರಿಯಡ್ಕ ಬಜೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಮೃತ ಬೈಕ್ ಸವಾರ ಕೋಟೇಶ್ವರದ ಮೊಹಮ್ಮದ್ ಹನೀಫ್ (45) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊಹಮ್ಮದ್ ಕುಕ್ಕೆಹಳ್ಳಿಯಿಂದ ಹಿರಿಯಡ್ಕ ಕಡೆ ಬೈಕ್ನಲ್ಲಿ ತೆರಳುತ್ತಿದ್ದು, ಈ ವೇಳೆ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆ ಬಳಿಕ ಚಾಲಕ ಟಿಪ್ಪರ್ ನ್ನು ಎರಡು ಕಿ.ಮೀ ದೂರದಲ್ಲಿ ರಸ್ತೆಬದಿ ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story