ಪುತ್ತೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ
ಪುತ್ತೂರು:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅರಿಯಡ್ಕ ಗ್ರಾಮ ಸಮಿತಿ ಶೇಕಮಲೆ ವತಿಯಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆ ಬುಧವಾರ ಆಚರಿಸಲಾಯಿತು.
ಧ್ವಜಾರೋಹಣ ಮಾಡುವ ಮೂಲಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .
ಕೇಶವ.ಬಿ.ಎಸ್ ದೀಪ ಬೆಳಗಿಸಿ , ಗೀತಾ ಎಸ್ ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು .
ದಲಿತ ಸಂಘರ್ಷ ಸಮಿತಿ ಗ್ರಾಮ ಸಮಿತಿ ಅಧ್ಯಕ್ಷರಾದ ನಾರಾಯಣ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು . ಸಂಘಟನೆಯ ಸರ್ವ ಸದಸ್ಯರು ಮತ್ತು ಪದಾಧಿಕಾರಿಗಳು ಭಾಗಿಯಾಗಿದ್ದರು .
ಪ್ರತೀಕ್ ಎಸ್ ಸ್ವಾಗತಿಸಿ ,ಸತೀಶ್ ವಂದಿಸಿದರು, ಲೋಕೇಶ್ ಎಸ್ ನಿರ್ವಹಿಸಿದರು.
Next Story