ಮಂಗಳೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯ ಸೆರೆ
ಮಂಗಳೂರು, ಎ.17: ನಗರದ ಕಲೆಕ್ಟರ್ ಗೇಟ್ ಬಳಿ ಕರ್ತವ್ಯ ನಿರತ ಸಂಚಾರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಯಶವಂತ ರಾಥೋಡ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಎಕ್ಕೂರು ನಿವಾಸಿ ಜಗತ್ (23) ಬಂಧಿತ ಆರೋಪಿಯಾಗಿದ್ದಾನೆ. ಶನಿವಾರ ಈತ ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸಿದ್ದನ್ನು ಕಂಡ ಅಲ್ಲೇ ಕರ್ತವ್ಯದಲ್ಲಿದ್ದ ರಾಥೋಡ್ ಪ್ರಶ್ನಿಸಿದ್ದಾರೆ. ಆಗ ಆತ ದರ್ಪದಿಂದ ಮಾತನಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಎನ್ನಲಾಗಿದೆ. ಈ ಬಗ್ಗೆ ಕಾನ್ಸಸ್ಟೇಬಲ್ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ.
Next Story