ನಿಗದಿಪಡಿಸಿದ್ದ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲು ರಘುಪತಿ ಭಟ್ ಆಗ್ರಹ
ಉಡುಪಿ, ಎ.21: ರಾಜ್ಯದಲ್ಲಿ ಕೋವಿಡ್ನ ಎರಡನೆ ಅಲೆ ಹಿನ್ನೆಲೆಯಲ್ಲಿ ಸರಕಾರ ಆದೇಶಿಸಿರುವ ಹೊಸ ಮಾರ್ಗಸೂಚಿಯಂತೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿದ್ದು, ರವಿವಾರ ಈಗಾಗಲೇ ನಿಗದಿಪಡಿಸಿರುವ ಮದುವೆ ಸೇರಿದಂತೆ ಇನ್ನಿತರ ಕಾರ್ಯಕ್ರಮ ಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮದುವೆ ಸೇರಿದಂತೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಿಗಧಿಗೊಂಡಿದ್ದು, ಈ ಕಾರ್ಯಕ್ರಮ ಗಳು ಸ್ಥಗಿತಗೊಂಡರೆ ಜನ ಸಮಸ್ಯೆಗೊಳಗಾಗುತ್ತಾರೆ. ಆದ್ದರಿಂದ ಜಿಲ್ಲಾಡಳಿತವು ಕೋವಿಡ್- 19 ಮುಂಜಾಗ್ರತಾ ಕ್ರಮ ಗಳೊಂದಿಗೆ 50 ಜನ ಮೀರದಂತೆ ಜನ ನಿಗಧಿಪಡಿಸಿ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಪಾಸನ್ನು ಪಡೆಯುವಂತೆ ಸೂಚಿಸಿ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
Next Story