ಹಳೆಯಂಗಡಿ : ಸಿಡಿಲಾಘಾತದಿಂದ ಗಾಯಗೊಂಡಿದ್ದ ಇನ್ನೋರ್ವ ಬಾಲಕ ಮೃತ್ಯು
ಮುಲ್ಕಿ : ಇಂದಿರಾನಗರ ಎಂಬಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕರಿಗೆ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.
ಹಳೆಯಂಗಡಿ ಇಂದಿರಾನಗರ ಬಳಿ ಮಂಗಳವಾರ ಸಂಜೆ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದ್ದು ಇದರಿಂದ ನಿಹಾನ್ ಹಾಗೂ ಮಾರುತಿ ಎಂಬ ಪುಟ್ಟ ಮಕ್ಕಳು ಗಂಭೀರ ಗಾಯಗೊಂಡಿದ್ದರು.
ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿದೆ.
Next Story