ಕೊರೋನಾ ಭೀತಿಯಿಂದ ಯುವಕ ಆತ್ಮಹತ್ಯೆ
ಮಲ್ಪೆ, ಎ.24: ಕೊರೋನ ಸೋಂಕು ಹೆಚ್ಚುತ್ತಿರುವ ಭೀತಿಯಿಂದ ಮಾನಸಿಕವಾಗಿ ನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.23ರಂದು ರಾತ್ರಿ ವೇಳೆ ಕೆಳಾರ್ಕಳಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡೌನ್ ರಸ್ತೆ ನಿವಾಸಿ ಪ್ರಸನ್ನ ಡಿ ಅಲ್ಮೇಡ(26) ಎಂದು ಗುರುತಿಸಲಾಗಿದೆ. ಇವರು ಕೆಲ ಸಮಯಗಳ ಹಿಂದೆ ಮಾನಸಿಕ ಖಿನ್ನತೆಗೆ ಒಳಪಟ್ಟಿದ್ದು, ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಇವರ ಅಣ್ಣ ಉದ್ಯೋಗದಲ್ಲಿರುವ ದೆಹಲಿಯಲ್ಲಿ ಕೊರೋನ ಹೆಚ್ಚುತ್ತಿರುವ ಬಗ್ಗೆ ಮಾನಸಿಕವಾಗಿ ನೊಂದಿದ್ದ ಇವರು, ಇದೇ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story