ವಿಟ್ಲ: ಈದುಲ್ ಫಿತ್ರ್ ಪ್ರಯುಕ್ತ ಪೊಲೀಸರು, ಕೋವಿಡ್ ಯೋಧರಿಗೆ ಊಟ, ರೇಶನ್ ಕಿಟ್ ವಿತರಣೆ
ವಿಟ್ಲ: ಈದುಲ್ ಫಿತ್ರ್ ಪ್ರಯುಕ್ತ ಕೋವಿಡ್ ಯೋಧರು ಸೇರಿ ನೂರಾರು ಜನರಿಗೆ ಮಂಗಳೂರು ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ರಶೀದ್ ವಿಟ್ಲ ಅವರ ನೇತೃತ್ವದಲ್ಲಿ ಮಧ್ಯಾಹ್ನದ ಊಟ ವಿತರಿಸಲಾಯಿತು.
ಪೊಲೀಸರು, ಹೋಮ್ ಗಾರ್ಡ್ಸ್, ಆರೋಗ್ಯ ಅಧಿಕಾರಿಗಳು, ಸಿಬ್ಬಂದಿಗಳು, ರೋಗಿಗಳು, ಪಂಚಾಯತ್ ನೌಕರರು, ಕಸ ಗುಡಿಸುವ, ಪೇಟೆಯ ಶುಚಿತ್ವ ಕಾಪಾಡುವ ಪೌರ ಕಾರ್ಮಿಕರು ಸೇರಿದಂತೆ ನೂರಾರು ಜನರಿಗೆ ರಶೀದ್ ವಿಟ್ಲ ಅವರ ನೇತೃತ್ವದಲ್ಲಿ ಮಧ್ಯಾಹ್ನದ ಬಿರಿಯಾನಿ ವಿತರಿಸಲಾಯಿತು.
ಜೊತೆಗೆ, ವಿಟ್ಲ ಪೊಲೀಸರಿಗೆ ಸಹಾಯ ಮಾಡುತ್ತಿರುವ ಹೋಮ್ ಗಾರ್ಡ್ಸ್ ಹಾಗೂ ಕಸ ವಿಲೇವಾರಿ ಕೆಲಸದಲ್ಲಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರಿಗೆ ಮಾನವೀಯ ನೆಲೆಯಲ್ಲಿ ಕೋವಿಡ್ ರೇಶನ್ ಕಿಟ್ ಗಳನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಸದಸ್ಯ ರಾಮ್ ದಾಸ್ ಶೆಣೈ, ವಿಟ್ಲ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಅಡ್ವಕೇಟ್ ಜಯರಾಮ ರೈ ಉಪಸ್ಥಿತರಿದ್ದರು.
ರಶೀದ್ ವಿಟ್ಲ ಅವರ ಜೊತೆ ಹನೀಫ್ ಕುದ್ದುಪದವು, ಫಾರೂಕ್ ಜುಬೇಲ್, ಸಫ್ವಾನ್ ವಿಟ್ಲ, ಹಾರೀಸ್ ಕೊಡಂಗಾಯಿ ಇದ್ದರು.