ಉಡುಪಿ; 60 ಮಂದಿ ಸ್ಥಳಾಂತರ, 14 ಪುನರ್ವಸತಿ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ
ಉಡುಪಿ, ಮೇ 16: ತೌಕ್ತೆ ಚಂಡಮಾರುತದ ಪ್ರಭಾವ ಜಿಲ್ಲೆಯಲ್ಲಿ ಸಾಕಷ್ಟು ಪರಿಣಾಮ ಬೀರಿದೆ. ಸುಮಾರು 60 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದ್ದು, ಅದರಂತೆ ಅವರೆಲ್ಲರು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಚಂಡಮಾರುತದಿಂದ ಹಾನಿಗೀಡಾಗಿರುವ ಮಲ್ಪೆ ಪಡುಕೆರೆ ಪ್ರದೇಶಕ್ಕೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.
ತೊಂದರೆಗೀಡಾಗುವ ಕುಟುಂಬಗಳಿಗೆ ಪುನರ್ವಸತಿ ಕೇಂದ್ರಗಳಲ್ಲಿ ಎಲ್ಲ ಸೌಲಭ್ಯಗಳೊಂದಿಗೆ ಉಳಿದು ಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸದ್ಯ ಈ ಕೇಂದ್ರಗಳಲ್ಲಿ ಯಾರು ಕೂಡ ಉಳಿದುಕೊಂಡಿಲ್ಲ ಎಂದ ಅವರು, ಚಂಡ ಮಾರುತದಿಂದ ಜಿಲ್ಲೆಯಲ್ಲಿ ಒಂದು ಜೀವಹಾನಿಯಾಗಿದ್ದು. ಅದರ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಅದು ಬಿಟ್ಟು ಯಾವುದೇ ಜೀವಹಾನಿಯಾಗ ದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ಅದೇ ರೀತಿ ಜಿಲ್ಲೆಯಾದ್ಯಂತ ಹಾನಿಗೊಳಗಾಗಿರುವ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್, ವಿದ್ಯುತ್ ತಂತಿಗಳನ್ನು ಕೂಡಲೇ ಸರಿಪಡಿಸು ವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ ಬಾರಿ ಮೆಸ್ಕಾಂಗೆ ಆರು ಕೋಟಿ ಹಣವನ್ನು ನೀಡಲಾಗಿದೆ. ಈ ಬಾರಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿಗಳು ಪಡುಕೆರೆಯ ವೀರಾಂಜನೆಯ ಭಜನಾ ಮಂದಿರ ಸಮೀಪ ಹಾಗೂ ಶಾಂತಿ ನಗರ ಬೀಚ್ಗೆ ತೆರಳಿ ಹಾನಿಯಾ ಗಿರುವ ಪ್ರದೇಶವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಜಿಪಂ ಮುಖ್ಯಕಾರ್ಯನಿರ್ವ ಹಣಾಧಿಕಾರಿ ಡಾ.ನವೀನ್ ಭಟ್, ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್
ನಿನ್ನೆ ಜಿಲ್ಲೆಗೆ ಅಪ್ಪಳಿಸಿರುವ ಚಂಡಮಾರುತ ಇಂದು ಗೋವಾ ದಾಟಿ ಮಹಾ ರಾಷ್ಟ್ರ ರಾಜ್ಯ ಪ್ರವೇಶಿಸಿದೆ. ಆದರೂ ಜಿಲ್ಲೆಯಲ್ಲಿ ಇಂದು ಮಳೆ ಮುಂದುವರೆಯ ಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲೆಯಲ್ಲಿ ಇಂದು ಸಂಜೆಯವರೆಗೆ ರೆಡ್ ಅರ್ಲಟ್ ಇದ್ದು, ನಾಳೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವು ಕಡೆಗಳಲ್ಲಿ ಭಾರೀ ಮಳೆಯಾ ಗುವ ಸಾಧ್ಯತೆ ಇದೆ. ಈ ಸಂಬಂಧ ಅಧಿಕಾರಿಗಳನ್ನು ಅಲರ್ಟ್ ಇಟ್ಟಿದ್ದೇವೆ. ಯಾವುದೇ ಹಾನಿ ಸಂಭವಿಸಿದರೆ ಕೂಡಲೇ ವರದಿ ಮಾಡಬೇಕು ಮತ್ತು ಜನರ ರಕ್ಷಣೆಗೆ ತೆರಳುವಂತೆ ಸೂಚನೆ ನೀಡಲಾಗಿದೆ ಎಂದರು.