ನೆಟ್ಲಮುಡ್ನೂರು : ಇಂದಿರಾ ಕ್ಷೇಮ ನಿಧಿಯಿಂದ ಕಿಟ್ ವಿತರಣೆ
ವಿಟ್ಲ : ಕೋವಿಡ್-19 ಎರಡನೇ ಅಲೆಯ ಸಂದಿಗ್ಧ ಸಂದರ್ಭದಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ನೆಟ್ಲಮುಡ್ನೂರು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ 21 ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಗುರುವಾರ ವಿತರಿಸಲಾಯಿತು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ಆಹಾರ ಸಾಮಗ್ರಿಗಳ ಕಿಟ್ಟನ್ನು ರಮಾನಾಥ ರೈ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್ ರೈ ಕುರ್ಲೆತ್ತಿಮಾರು, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ ರೈ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ, ಪ್ರೇಮಾ, ಲಕ್ಷ್ಮೀ, ಪಕ್ಷ ಪ್ರಮುಖರಾದ ಯೂಸುಫ್ ಹಾಜಿ ಕೊಡಾಜೆ, ಅದ್ದ ಹಾಜಿ ಕೊಡಾಜೆ, ದೇರಣ್ಣ ಪೂಜಾರಿ, ನಾರಾಯಣ ಗೌಡ, ಎನ್.ಕೆ. ಅಬೂಬಕ್ಕರ್, ಪಿ.ಕೆ.ಅಬ್ಬಾಸ್ ಪರ್ಲೊಟ್ಟು, ಸಿದ್ದೀಕ್ ಪರ್ಲೊಟ್ಟು, ಶೇಖರ ಮೀನಾವು, ಹಮೀದ್ ಸಕ್ಸಸ್, ಸಿದ್ದೀಕ್ ಸರವು, ಅರ್ಶದ್ ಸರವು, ಸಿರಾಜ್ ಮದಕ, ಹರ್ಷದ್ ಕುಕ್ಕಿಲ ಮೊದಲಾದವರು ಉಪಸ್ಥಿತರಿದ್ದರು.