ಭಾರತೀಯ ವಿಕಾಸ ಟ್ರಸ್ಟ್ನಿಂದ ಆಹಾರ ಸಾಮಗ್ರಿ ಕಿಟ್ ವಿತರಣೆ
ಮಣಿಪಾಲ, ಜೂ.18: ಶಿವಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ) ಮೂಲಕ ಕುಂದಾಪುರ ತಾಲೂಕು ಹೊಸಾಡು ಗ್ರಾಪಂ ವ್ಯಾಪ್ತಿಯ ಮುಳ್ಳಿಕಟ್ಟೆ ಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ವಾಸವಾಗಿರುವ ವಲಸೆ ಕಾರ್ಮಿಕರಿಗೆ ಆಹಾರ ಸಾುಗ್ರಿ ಕಿಟ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿವಿಟಿಯ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ, ಸಂಸ್ಥೆಯ ಮೂಲಕ ಕೋವಿಡ್ ಲಾಕ್ಡೌನ್ ಸಂದರ್ಭ ದಲ್ಲಿ ಗ್ರಾಮಪಂಚಾಯತ್ಗಳ ಜೊತೆ ಸೇರಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಇಂದು ಆಹಾರ ಸಾಮಗ್ರಿ ಕಿಟ್ ವಿತರಿಸಲಾಗಿದೆ ಎಂದರು.
ಹೊಸಾಡು ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಾರ್ವತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿವಿಟಿಯ ತರಬೇತುದಾರ ಸುಧೀರ್ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿವಿಟಿಯ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ, ಅರುಣ್, ರಾಘವೇಂದ್ರ ಆಚಾರ್ಯ, ಸುರೇಶ್ ಹಾಗೂ ಸೆಲ್ಕೋದ ಹಿರಿಯ ವ್ಯವಸ್ಥಾಪಕ ಶೇಖರ ಶೆಟ್ಟಿ, ಸೆಲ್ಕೋ ಶಾಖಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.
Next Story