ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಶನಿವಾರ ಉಡುಪಿಗೆ
ಉಡುಪಿ, ಜೂ.18: ರಾಜ್ಯ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಅವರು ಶನಿವಾರ ಹಾಗೂ ರವಿವಾರ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಅಪರಾಹ್ನ 3:30ಕ್ಕೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸುವ ಸಚಿವರು ಉಡುಪಿಯಲ್ಲಿ ವಾಸ್ತವ್ಯ ಮಾಡುವರು. ರವಿವಾರ ಸಂಜೆ 4:30ಕ್ಕೆ ಬೆಳಪು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕ ಹಾಗೂ ಮೂಲಭೂತ ಸೌಕರ್ಯ ಗಳನ್ನು ಪರಿಶೀಲಿಸುವರು. ಬಳಿಕ 5:15ಕ್ಕೆ ನಂದಿಕೂರು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಸೌಲಭ್ಯ ಗಳನ್ನು ವೀಕ್ಷಿಸಿ, ಕೈಗಾರಿಕೋ ದ್ಯಮಿಗಳೊಂದಿಗೆ ಸಂವಾದ ನಡೆಸುವರು.
ಸಂಜೆ 7:00ಕ್ಕೆ ಉಡುಪಿಗೆ ಮರಳುವ ಸಚಿವ ಜಗದೀಶ್ ಶೆಟ್ಟರ್, ಇಲ್ಲಿ ವಾಸ್ತವ್ಯ ಮಾಡಿ, ಸೋಮವಾರ ಅಪರಾಹ್ನ 12:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು.
Next Story