ಸುರತ್ಕಲ್: ಆಟೋ,ಟ್ಯಾಕ್ಸಿ ಚಾಲಕರಿಗೆ ಕೋವಿಡ್ ಲಸಿಕೆ ಅಭಿಯಾನ
ಮಂಗಳೂರು, ಜೂ.22: ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆಟೋ,ಟ್ಯಾಕ್ಸಿ ಚಾಲಕರಿಗೆ ಕೋವಿಡ್ ಲಸಿಕೆ ಅಭಿಯಾನ ನಡೆಯಿತು.
ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ, ರಿಕ್ಷಾ ಸಹಿತ ಚಾಲಕ ವರ್ಗ ಜನ ಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಹೊಂದಿರುತ್ತಾರೆ. ಚಾಲಕರು ಲಸಿಕೆ ಪಡೆದುಕೊಂಡಲ್ಲಿ ಪ್ರಯಾಣಿಕರಿಗೂ ಧೈರ್ಯ ಬರುತ್ತದೆ. ಈ ನಿಟ್ಟಿನಲ್ಲಿ ಮಂಗಳೂರು ಉತ್ತರ ಕ್ಷೇತ್ರದಾದ್ಯಂತ ಈ ಅಭಿಯಾನ ನಡೆಸಲಾಗುತ್ತಿದೆ. ಸರ್ವರಿಗೂ ಲಸಿಕೆ ಸಿಗುವಂತಾಗಲು ಆನ್ಲೈನ್ ಜತೆಗೆ ಸ್ಥಳದಲ್ಲೇ ನೋಂದಣಿ ಮಾಡಿ ಪಡೆಯಬಹುದಾಗಿದೆ. ದೇಶದ ಅತೀ ದೊಡ್ಡ ಲಸಿಕಾ ಮೇಳ ಇದಾಗಿದೆ ಎಂದರು.
ಬಿಜೆಪಿ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಯುವ ಮೋರ್ಚಾದ ಭರತ್ ರಾಜ್ ಕೃಷ್ಣಾಪುರ, ಕಾರ್ಪೊರೇಟರ್ಗಳು, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
Next Story