ಕಾಸರಗೋಡು: ಲಾರಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಕಾಸರಗೋಡು : ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಬೇಕಲ ಸೇತುವೆ ಬಳಿ ನಡೆದಿದೆ.
ಬೇಕಲ ಚಿರಮ್ಮಲ್ ನಿವಾಸಿ ಬಾಬು ರಾಜ್ (45) ಮೃತರು ಎಂದು ಗುರುತಿಸಲಾಗಿದೆ.
ಬಾಬು ರಾಜ್ ಅವರು ಕಾರ್ಮಿಕರಾಗಿದ್ದರು ಅಲ್ಲದೆ ಜಾದೂಗಾರರಾಗಿಯೂ ಹೆಸರು ಗಳಿಸಿದ್ದರು. ಹೊಂಡವನ್ನು ತಪ್ಪಿಸುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story