ಕಾರ್ಗಿಲ್ ವಿಜಯ ದಿವಸ್; ಹುತಾತ್ಮ ಯೋಧರಿಗೆ ಸಿಎಂ ಯಡಿಯೂರಪ್ಪ ಗೌರವ ಸಲ್ಲಿಕೆ
ಬೆಂಗಳೂರು, ಜು. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.
ಇದೆ ಸಂದರ್ಭ ಶೌರ್ಯ ಚಕ್ರ ಪುರಸ್ಕೃತ ಲೆ. ಕರ್ನಲ್ ಅಜಿತ್ ವಿ.ಭಂಡಾರ್ಕರ್ ಅವರ ಆತ್ಮಚರಿತ್ರೆ 'Saga of a Brave heart ' ಪುಸ್ತಕ ವನ್ನು ಸಿಎಂ ಅವರು ಬಿಡುಗಡೆ ಮಾಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.