ಸಮಗ್ರ ಕೃಷಿ ಮಾಹಿತಿ, ಬೆಳೆ ಸಮೀಕ್ಷೆ -ಬೆಳೆ ವಿಮೆ ರಥಕ್ಕೆ ಚಾಲನೆ
ಬ್ರಹ್ಮಾವರ, ಜು. 26: ಉಡುಪಿ ಜಿಪಂ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಪಂಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ, ಸಮಗ್ರ ಕೃಷಿ ಮಾಹಿತಿ ರಥ, ಬೆಳೆ ಸಮೀಕ್ಷೆ -ಬೆಳೆ ವಿಮೆ ರಥಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಬ್ರಹ್ಮಾವರ ತಾಪಂ ಆವರಣದಲ್ಲಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಕಾರ್ಯಕ್ರಮಗಳ ಮಾಹಿತಿ ಕೈಪಿಡಿ ಯನ್ನು ಬಿಡುಗಡೆಗೊಳಿಸಲಾಯಿತು. ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ಗುಲಾಬಿ, ಹಂದಾಡಿ ಗ್ರಾಪಂ ಅಧ್ಯಕ್ಷ ಉದಯ ಪೂಜಾರಿ, ಬ್ರಹ್ಮಾವರ ತಾಪಂ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್ ಮೊದಲಾದವರು ಉಪಸ್ಥಿತರಿದ್ದರು.
Next Story