ಆದಿಉಡುಪಿ ಎಪಿಎಂಸಿಗೆ 2ಕೋಟಿ ರೂ. ಅನುದಾನ ಮಂಜೂರು
ಉಡುಪಿ, ಜು.27: ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಆದಿಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಗೆ ಸರಕಾರದಿಂದ 2 ಕೋಟಿ ರೂ. ಮಂಜೂರಾಗಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಇಂದು ಮಾರು ಕಟ್ಟೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಅಧಿಕಾರಿ ಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷರಾದ ಸತೀಶ್ ಶೆಟ್ಟಿ ನಂಚಾರು, ಉಪಾಧ್ಯಕ್ಷ ಕೃಷ್ಣ ಪೂಜಾರಿ, ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಗಾಯತ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Next Story