ಬಸ್ ಢಿಕ್ಕಿ : ಪಾದಚಾರಿ ಮೃತ್ಯು
ಕಾಪು, ಜು.29: ರಾಷ್ಟ್ರೀಯ ಹೆದ್ದಾರಿ 66ನ್ನು ದಾಟಲು ರಸ್ತೆ ವಿಭಾಜಕದ ಬಳಿ ನಿಂತಿದ್ದ ವ್ಯಕ್ತಿಗೆ ಬಸ್ಸೊಂದು ಢಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರಿನ ಎಸ್ಎಂ ನರ್ಸರಿ ಎದುರು ಬುದವಾರ ನಡೆದಿದೆ.
ಮೃತರನ್ನು ಮೂಳೂರು ಅರಸು ತೋಟದಲ್ಲಿ ವಾಸವಾಗಿರುವ ವಿಜಯ ಶೆಟ್ಟಿ (58) ಎಂದು ಗುರುತಿಸಲಾಗಿದೆ. ಇವರು ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಗನ ಬಳಿ ಹೋಗಲು ರಸ್ತೆ ವಿಭಜಕದ ಪೂರ್ವ ಬದಿಯ ಅಂಚಿನಲ್ಲಿ ನಿಂತಿದ್ದಾಗ ಮಂಗಳೂರಿನಿಂದ ಉಡುಪಿಯತ್ತ ವೇಗವಾಗಿ ಧಾವಿಸುತಿದ್ದ ಎಕ್ಸ್ಪ್ರೆಸ್ ಬಸ್ ಡಿಕ್ಕಿ ಹೊಡೆದಿತ್ತು.
ಕೂಡಲೇ ಮಗ ವಿಪುಲ್ ಶೆಟ್ಟಿ ತಂದೆಯನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಕರೆತಂದರೂ. ಅವರಾಗಲೇ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದರು. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story