ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಆ.2: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಡಾರು ಗ್ರಾಮದ ಬಜಗೋಳಿ ಕಂಬಳ ಕ್ರಾಸ್ ಎಂಬಲ್ಲಿ ಆ.2ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೈಕ್ ಸವಾರ ಶೇಖರ್ ದೇವಾಡಿಗ ಎಂದು ಗುರುತಿಸಲಾಗಿದೆ. ಸಹಸವಾರ ಹುಕ್ರ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಕಡೆಯಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಕಾರು, ಕಂಬಳ ಕ್ರಾಸ್ ಬಳಿ ಯೂ ಟರ್ನ್ ಪಡೆದು ಬಜಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರರಿಬ್ಬರು ರಸ್ತೆಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಗಂಭೀರ ವಾಗಿ ಗಾಯಗೊಂಡ ಶೇಖರ ದೇವಾಡಿಗ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story