ಸುಳ್ಯ: ಯುವಕನಿಗೆ ಢಿಕ್ಕಿ ಹೊಡೆದು ಪರಾರಿಯಾದ ಬೊಲೆರೋ; ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಸುಳ್ಯ: ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಯುವಕನೊಬ್ಬನಿಗೆ ಬೊಲೆರೋ ವಾಹನ ಢಿಕ್ಕಿಯಾಗಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಬಳಿಕ ಊರವರು ವಾಹನವನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.
ಸಂಪಾಜೆ ಗ್ರಾಮದ ಗೂನಡ್ಕ ತಿರುವೊಂದರಲ್ಲಿ ಸಲೀಂ ಎಂಬ ಯುವಕ ಹೋಗುತ್ತಿದ್ದಾಗ ಆ ರಸ್ತೆಯಾಗಿ ಬಂದ ದಾವಣಗೆರೆಯ ಬೊಲೆರೋ ವಾಹನವೊಂದು ಢಿಕ್ಕಿ ಹೊಡೆಯಿತು. ಪರಿಣಾಮ ಬೊಲೆರೋ ವಾಹನ ಚಾಲಕ ವಾಹನ ನಿಲ್ಲಿಸದೆ ಹೋಗಿದ್ದು, ಬಳಿಕ ಊರವರು ಹಿಂಬಾಲಿಸಿ ಚಟ್ಟಿಕಲ್ಲು ಎಂಬಲ್ಲಿ ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದರೆಂದು ತಿಳಿದುಬಂದಿದೆ.
ಬೊಲೆರೋ ವಾಹನ ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಸಲೀಂ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story