ಯುವಕ ಆತ್ಮಹತ್ಯೆ
ಉಡುಪಿ, ಆ.4: ಕುಕ್ಕಿಕಟ್ಟೆ ಇಂದಿರಾನಗರ ಚರ್ಚಿನ ಬಳಿಯ ಬಾಡಿಗೆ ಮನೆ ಯೊಂದರಲ್ಲಿ ವಾಸವಾಗಿದ್ದ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಮೃತರನ್ನು ಜಗದೀಶ್(30) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾ ಗಿದೆ. ಶವಸಾಗಿಸಲು ನಿತ್ಯಾನಂದ ಒಳಕಾಡು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಸಹಕರಿಸಿದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story