ಕೊಲ್ಲೂರು: ವೈದ್ಯಾಧಿಕಾರಿ ಆತ್ಮಹತ್ಯೆ
ಕೊಲ್ಲೂರು, ಆ.4: ಕೊಲ್ಲೂರು ಪ್ರಾಥಮಿಕ ಪಶು ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ಆಸ್ಪತ್ರೆಯಲ್ಲಿಯೇ ಬ್ಲೆಡ್ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ವೈದ್ಯಾಧಿಕಾರಿ ಡಾ.ಜಿ.ಎಸ್.ವಿವೇಕಾನಂದ ಶೆಟ್ಟಿ(57) ಎಂದು ಗುರುತಿಸಲಾಗಿದೆ.
ಮಧುಮೇಹ ಖಾಯಿಲೆಯಿಂದ ಬಳಲುತ್ತಿದ್ದ ಇವರು, ಇದೇ ಕಾರಣದಿಂದ ಅಥವಾ ವೈಯಕ್ತಿಕ ಕಾರಣಗಳಿಂದ ಮನನೊಂದು ಆಸ್ಪತ್ರೆಯಲ್ಲಿ ಬ್ಲೆಡ್ ನಿಂದ ಕುತ್ತಿಗೆ ಕೊಯ್ದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story