ಉಪ್ಪಿನಂಗಡಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಪೊಯ್ಯೆ ಎಂಬಲ್ಲಿ ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಸ್ಥಳೀಯ ನಿವಾಸಿ ನಾಣ್ಯಪ್ಪ ಪೂಜಾರಿ (54) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.
ತನ್ನ ಮನೆಯ ಬಳಿ ಇದ್ದ ತೆಂಗಿನ ಮರದ ಬುಡಕ್ಕೆ ಸೊಪ್ಪು ಹಾಕಲೆಂದು ಮನೆ ಸಮೀಪದ ತೋಡನ್ನು ದಾಟಿ ಹೋಗುವಾಗ ತೋಡಿನಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ತಿಳಿಯದೇ ಸ್ಪರ್ಶಿಸಿದ್ದಾರೆ. ಪರಿಣಾಮವಾಗಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಒರ್ವ ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೆ ಭೇಟಿ ನೀಡಿ ಇಲಾಖಾತ್ಮಕ ಕ್ರಮ ಕೈಗೊಂಡಿದ್ದಾರೆ.
Next Story