ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಬೈಂದೂರು, ಆ.26: ಎಡಕಾಲಿನ ಮೊಣಗಂಟು ನೋವಿನಿಂದ ಬಳಲುತ್ತಿದ್ದ ಮಾಧವ ಪೂಜಾರಿ(68) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.25ರಂದು ರಾತ್ರಿ ಮನೆಯ ಹತ್ತಿರವಿರುವ ಸರಕಾರಿ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಸತೀಶ್ ಕುಲಾಲ್(33) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.24ರ ಮಧ್ಯರಾತ್ರಿಯಿಂದ ಆ.26ರ ಬೆಳಗಿನ ಮಧ್ಯಾವಧಿಯಲ್ಲಿ ಮನೆ ಸಮೀಪದ ವ್ಯಾಘ್ರಚಾಮುಂಡಿ ದೈವಸ್ಥಾನದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story